ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಪುನರಾರಂಭ!!

ಚಿಕ್ಕಮಗಳೂರು :

      ಭಾರೀ ಮಳೆಯಿಂದಾಗಿ ಗುಡ್ಡ ಕುಸಿತದಿಂದಾಗಿ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

      ಕೇವಲ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ನೀಡಿದ್ದು, ಅದೂ ಕೂಡಾ ಬೆಳಗ್ಗೆ 6 ಗಂಟೆಯಿಂದ ಸಂಜೆ 7ರವರೆಗೆ ಮಾತ್ರ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ 20 ಕಿ.ಮೀ. ವೇಗದ ಮಿತಿ ದಾಟದಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ. 

      ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು, ಹಲವೆಡೆ ರಸ್ತೆ ಕೊಚ್ಚಿ ಹೋಗಿತ್ತು. ಕಳೆದ ಆಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ಸಂಚಾರ ಬಂದ್ ಆಗಿತ್ತು. ಇದರಿಂದ ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತವಾಗಿತ್ತು.

      ಸದ್ಯ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಿರೋದ್ರಿಂದ ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ. ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link