ಪೂಜಾ ವಿಧಿವಿಧಾನಗಳಿಲ್ಲದೆ ಚಿದಾನಂದಮೂರ್ತಿ ಅಂತ್ಯಕ್ರಿಯೆ!!

ಬೆಂಗಳೂರು:

      ನಿನ್ನೆ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆಯನ್ನು ಇಂದು ಬೆಂಗಳೂರಿನ ಸುಮನಹಳ್ಳಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

       ಬೆಳಗ್ಗೆ 11ಗಂಟೆಗೆ ಅಂತ್ಯಕ್ರಿಯೆಯನ್ನು ಯಾವುದೇ ಪೂಜಾ ವಿಧಿವಿಧಾನಗಳಿಲ್ಲದೆ ನಡೆಸಲಾಯಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವ ವಿ. ಸೋಮಣ್ಣ ಮುಂತಾದವರು ಉಪಸ್ಥಿತರಿದ್ದರು. 

      ಯಾವುದೇ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡುವುದು ಬೇಡ ಎಂದು ಅವರೇ ತಿಳಿಸಿದಂತೆ ಅವರ ಅಂತಿಮ ಆಸೆಯನ್ನು ಪೂರೈಸುವ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಯಾವುದೇ ರೀತಿಯ ಪೂಜೆ, ವಿಧಿ-ವಿಧಾನಗಳನ್ನು ಪಾಲಿಸದೆ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಿದರು.

      ಯಾವುದೇ ಮೆರವಣಿಗೆ ಇಲ್ಲದೆ ಚಿದಾನಂದಮೂರ್ತಿ ಅವರ ನಿವಾಸದಿಂದ ಪಾರ್ಥಿವ ಶರೀರವನ್ನು ಸುಮನಹಳ್ಳಿಯ ಚಿತಾಗಾರಕ್ಕೆ ತರಲಾಯಿತು. ಬಿ. ಎಸ್. ಯಡಿಯೂರಪ್ಪ ಅಂತಿಮವಾಗಿ ಪುಷ್ಪ ನಮನ ಸಲ್ಲಿಸಿದರು.

      ಸರ್ಕಾರದ ಪರವಾಗಿ ಪೊಲೀಸರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬಸ್ಥರು ಚಿದಾನಂದಮೂರ್ತಿ ಅಂತಿಮ ಇಚ್ಛೆಯಂತೆ ಯಾವುದೇ ಪೂಜೆಯನ್ನು ಮಾಡದೆ ಅಂತ್ಯ ಸಂಸ್ಕಾರವನ್ನು ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap