ಮರಕ್ಕೆ ಡಿಕ್ಕಿ ಹೊಡೆದ ಕಾರು : ಮೂವರ ದುರ್ಮರಣ!!

ಚಿಕ್ಕಮಗಳೂರು : 

     ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಬಳಿ  ನಡೆದಿದೆ.

      ಮಹೇಶ್, ನಾಗರಾಜ್ ಮತ್ತು ಸುರೇಶ್ ಮೃತ ದುರ್ದೈವಿಗಳು. ಮೃತರು ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮೂಲದವರು ಎಂದು ತಿಳಿದುಬಂದಿದೆ.

      ಒಟ್ಟು 6 ಮಂದಿ ಟೊಯೋಟಾ ಕಾರಿನಲ್ಲಿ ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಹೋಗಿದ್ದರು. ಮಂಜುನಾಥನ ದರ್ಶನ ಮುಗಿಸಿಕೊಂಡು ವಾಪಸ್ ಬಳ್ಳಾರಿಗೆ ಹೋಗುತ್ತಿದ್ದರು. ಈ ವೇಳೆ ಉದ್ದೇಬೋರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

      ಗಾಯಗೊಂಡವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

      ಘಟನಾ ಸ್ಥಳಕ್ಕೆ ಕಡೂರು ತಾಲೂಕಿನ ಸಖರಾಯ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಘಟನೆ ಸಂಬಂಧ ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap