ಚಿತ್ರದುರ್ಗ:
ಅಪಘಾತವಾಗಿ ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗದ ಕುಂಚಿಗನಾಳ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುವಾಗ ಈ ದುರ್ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು 25 ವರ್ಷದ ಅರುಣ್ ಎಂದು ಗುರುತಿಸಲಾಗಿದೆ. ಸದಾನಂದ, ಸಿರೀಶ್ ಹಾಗೂ ಕಾರು ಚಾಲಕ ಪವನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿನ್ನೆಯಷ್ಟೇ ಇನ್ನೋವಾ ಕಾರೊಂದು ಟೈರ್ ಸಿಡಿದು ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದರು. ಅಪಘಾತವಾಗಿದ್ದ ಆ ಲಾರಿಯನ್ನು ಸ್ಥಳಾಂತರಿಸದೇ ಅಲ್ಲಿಯೇ ಬಿಟ್ಟಿದ್ದರು. ಇದೇ ಲಾರಿಗೆ ಮತ್ತೆ ಕಾರು ಡಿಕ್ಕಿ ಹೊಡೆದಿದೆ.
ನಿನ್ನೆ ಅಪಘಾತವಾಗಿದ್ದ ಲಾರಿಯನ್ನು ಸ್ಥಳಾಂತರಿಸದೇ ನಿರ್ಲಕ್ಷ್ಯ ತೋರಿದ ಪೊಲೀಸರೇ ಈ ಘಟನೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/ctd-accident-768x441.gif)