‘ಸಿದ್ದರಾಮಯ್ಯಗೆ 3 ವರ್ಷ ವಿರೋಧಪಕ್ಷ ಸ್ಥಾನ ಫಿಕ್ಸ್’ – ಸಿಎಂ ವ್ಯಂಗ್ಯ

ಬೆಂಗಳೂರು :

      3 ವರ್ಷಗಳ ಕಾಲ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿಯೇ ಇರುತ್ತಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

      ನಗರದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪದೇ ಪದೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಹೇಳುತ್ತಿದ್ದಾರೆ. ಉಪಚುನಾವಣೆ ನಂತರ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯುವುದಿಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನದಲ್ಲೇ ಕುಳಿತು ಕೊಳ್ಳಬೇಕು,ಇದನ್ನು ಪ್ರಚಾರಕ್ಕಾಗಿ ಹೇಳುತ್ತಿಲ್ಲ, ಅಳೆದು ತೂಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದರು.

      ಉಪಚುನಾವಣೆ ನಂತರ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯುವುದಿಲ್ಲ.  ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲಲಿದ್ದು, ಮಧ್ಯಂತರ ಚುನಾವಣೆ ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap