ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಮಿಷನ್ ದಂಧೆಯ ಜನಕ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ಯುವನಾಯಕ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪ್ರಕರಣವನ್ನು ಸಿಬಿಐಗಾದರೂ ವಹಿಸಲಿ ಡುನಾಲ್ಡ್ ಟ್ರಂಪ್ ಗಾದರೂ ವಹಿಸಲಿ ಎಂದು ಸಿಡುಕಾಗಿ ಹೇಳಿಕೆ ನೀಡಿದ್ದರು. ನಮ್ಮ ಸರ್ಕಾರ ವರ್ಗಾವಣೆ ದಂಧೆ ಮಾಡಿದೆ ಅಂದರು. ಆದರೆ ಯಲಹಂಕ ತಹಶೀಲ್ದಾರ್ ಪೋಸ್ಟ್ ಗೆ ಎಷ್ಟು ವ್ಯವಹಾರ ಆಯ್ತು ಹೇಳಿ. ನಮಗೆ ವರ್ಗಾವಣೆ ಲೂಟಿ ಅಂತೀರಿ, ನೀವೇನು ಮಾಡುತ್ತಿದ್ದೀರಿ. ವರ್ಗಾವಣೆ ದಂಧೆಗೆ ಯಡಿಯೂರಪ್ಪನವರು ಸುಪುತ್ರನನ್ನೇ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಕಮೀಷನ್ ದಂಧೆ ,ವರ್ಗಾವಣೆ ದಂಧೆ,ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರ ಸ್ವಾಮಿಯವರೇ, “ಕೋತಿ ತಾನು ತಿಂದು ಮೇಕೆ ಬಾಯಿಗೆವರೆಸಿ ದಂತಿದೆ “ನಿಮ್ಮ ಮಾತುಗಳು.
CBI ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ಧಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ. pic.twitter.com/C9y5U1eCoa— Vijayendra Yeddyurappa (@BYVijayendra) August 19, 2019
ಕುಮಾರಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ವಿಜಯೇಂದ್ರ, ಕುಮಾರಸ್ವಾಮಿ ಕಮೀಷನ್ ವರ್ಗಾವಣೆ, ನೇಮಕಾತಿ ದಂಧೆಗಳ ಜನಕ ಹಾಗೂ ಗುತ್ತಿಗೆದಾರರು ಎಂಬುದು ಇಡೀ ರಾಜ್ಯಕ್ಕೆ ತಿಳಿದ ವಿಚಾರ. ಕುಮಾರಸ್ವಾಮಿ ಅವರ ಮಾತುಗಳು “ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತೆ” ಇದೆ. ಸಿಬಿಐ ತನಿಖೆಗೆ ಹೆದರಿ ಅವರು ಹತಾಶ ಹೇಳಿಕೆಗಳನ್ನು ನೀಡುವ ಮೂಲಕ ವಿಷಯಾಂತರಗೊಳಿಸುವ ಮೂಲಕ ಜನರ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/vijayendra-hdk.gif)