ಬೆಂಗಳೂರು :
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಜಮೀರ್ ಅಹಮ್ಮದ್ಖಾನ್ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಡಿನೋಟಿಫಿಕೇಶನ್ ಪ್ರಕರಣ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ. ಲೋಕಾಯುಕ್ತ ಪೊಲೀಸರ ನಿಗಾದಲ್ಲಿ ತನಿಖೆಯಾಗಬೇಕು. ಆದರೆ ಎಲ್ಲಾ ಸಂಸ್ಥೆಗಳು ಸಿಎಂ ಬಿ ಎಸ್ ವೈ ಅಧೀನದಲ್ಲಿದೆ. ಹೀಗಾಗಿ ತನಿಖೆ ಮೇಲೆ ಸಿಎಂ ಪ್ರಭಾವ ಬೀರುವ ಸಾಧ್ಯತೆಯಿದೆ. ಗಂಭೀರ ಆರೋಪವಿರುವಾಗ ಸಿಎಂ ಯಡಿಯೂರಪ್ಪ ಅಧಿಕಾರದಲ್ಲಿ ಮುಂದುವರೆಯಲು ಹೇಗೆ ಸಾಧ್ಯ? ಮಾನ ಮರ್ಯಾದೆ ಇದ್ದರೆ ತಕ್ಷಣ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಭಂಡತನದಲ್ಲಿ ಅಧಿಕಾರದಲ್ಲಿ ಮುಂದುವರಿದರೆ ಹೇಗೆ ರಾಜೀನಾಮೆ ಕೊಡಿಸಬೇಕೋ ಹಾಗೆ ನಾವು ಮಾಡುತ್ತೇವೆ ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾನು ತಿನ್ನುವುದಿಲ್ಲ. ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದರು. ಅವರು ಹೇಳಿದಂತೆ ನಡೆದುಕೊಳ್ಳಬೇಕು. ತಮ್ಮ ಮೇಲಿನ ಆರೋಪ ದುರುದ್ದೇಶ ಪೂರಿತ ಎಂದು ಯಡಿಯೂರಪ್ಪ ಅವರಿಗೆ ಅನ್ನಿಸಿದರೆ ಸುಪ್ರೀಂಕೋರ್ಟ್ಗೆ ಬೇಕಾದರೂ ಹೋಗಲಿ. ಆದರೆ, ಮೊದಲು ಕುರ್ಚಿಯಿಂದ ಕೆಳಗಿಳಿದು ನಂತರ ಹೋರಾಟ ಮಾಡಲಿ ಎಂದು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/12/Siddaramaiah-and-yeddyurappa.jpg)