ಜೈಲಿನಲ್ಲಿ ಡಿಕೆಶಿ ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿ!!

ನವದೆಹಲಿ :

      ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

      ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಜೊತೆ ತಿಹಾರ್ ಜೈಲಿಗೆ ತೆರಳಿದ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

      ಭೇಟಿ ಬಳಿಕ ಮಾತನಾಡಿದ ಅವರು, ಇದೊಂದು ಸೌಹಾರ್ಧಯತವಾದ ಭೇಟಿಯಾಗಿದ್ದು, ಡಿಕೆಶಿ ಇಷ್ಟೆಲ್ಲದರ ನಡುವೆಯೂ ಧೈರ್ಯದಿಂದ ಇದ್ದಾರೆ. ಮುಂದಿನ ಹೋರಾಟಕ್ಕೆ ಮಾನಸಿಕವಾಗಿ ತಯಾರಾಗುತ್ತಿದ್ದಾರೆ. ಎಲ್ಲವನ್ನೂ ಎದುರಿಸಿ ಹೊರಬರುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

      ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಇಂದು ತಿಹಾರ್ ಜೈಲಿಗೆ ತೆರಳಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link