ಸಿಎಂ ತವರು ಜಿಲ್ಲೆಯಲ್ಲಿ ಮತದಾನ ಬಹಿಷ್ಕಾರ!!

ರಾಮನಗರ :

      ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮಸ್ಥರಿಂದ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.

      ಹಲವು ವರ್ಷಗಳಿಂದ ಗ್ರಾಮದ ರಸ್ತೆ, ಮೂಲ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ. ಪ್ರತಿ‌ ಚುನಾವಣೆ ಸಮಯದಲ್ಲೂ ಸುಳ್ಳು ಆಶ್ವಾಸನೆ ಕೊಟ್ಟು ಮೋಸ ಮಾಡುತ್ತಿದ್ದಾರೆ. ಆದ್ದರಿಂದ ಯಾವುದೇ ರಾಜಕಾರಣಿಗಳಿಗೂ ನಮ್ಮ‌ ಗ್ರಾಮಕ್ಕೆ ಪ್ರವೇಶವಿಲ್ಲ’ ಎಂದು ಗ್ರಾಮಸ್ಥರು ಬ್ಯಾನರ್‌ ಹಾಕಿ ಆಕ್ರೋಶ ಪ್ರದರ್ಶಿಸಿದ್ದಾರೆ. 

       ಹೀಗಾಗಿ ಈ ಬಾರಿಯಾದರೂ ನಮ್ಮ ಗ್ರಾಮಕ್ಕೆ ಆಗತ್ಯವಿರುವ ಮೂಲಭೂತ ಕೆಲಸಗಳನ್ನು ಮಾಡಿಕೊಡಬೇಕು. ನಮ್ಮ ಗ್ರಾಮ ಅಭಿವೃದ್ಧಿ ಪಡಿಸುವ ಜನಪ್ರತಿನಿಧಿಗೆ ನಾವು ಮತ ಹಾಕುತ್ತೇವೆ. ಇಲ್ಲವಾದರೆ ನಾವು ಯಾವುದೇ ಕಾರಣಕ್ಕೂ ಮತದಾನ ಮಾಡುವುದಿಲ್ಲ ಎಂದು ಗ್ರಾಮದಲ್ಲಿ ಎಲ್ಲರೂ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap