ನೆರೆ ಪರಿಹಾರ : ಅನುದಾನ ಬಿಡುಗಡೆಗೆ ಪ್ರಧಾನಿಯೊಂದಿಗೆ ಬಿಎಸ್ವೈ ಚರ್ಚೆ!

ನವದೆಹಲಿ:

      ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಅಧ್ಯಯನ ತಂಡ ಕಳುಹಿಸುವಂತೆ ಹಾಗೂ ತುರ್ತು ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

     ಸುಮಾರು 40 ನಿಮಿಷಗಳ ಕಾಲ ಪ್ರಧಾನಿಯೊಂದಿಗೆ ಮುಖ್ಯಮಂತ್ರಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ತೀವ್ರ ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. 

      ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನೆರೆಹಾವಳಿಯಿಂದ ಉಂಟಾದ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದು, ಇದರ ಸಂಪೂರ್ಣ ಮಾಹಿತಿಯನ್ನು ಪ್ರಧಾನಿಗೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಕೂಡ ಈ ಸಂದರ್ಭದಲ್ಲಿ ಇದ್ದು, ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅಮಿತ್ ಶಾ ಕೂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಕೇಂದ್ರದಿಂದ ಮತ್ತೊಂದು ಅಧ್ಯಯನ ತಂಡ ರಾಜ್ಯಕ್ಕೆ ಶೀಘ್ರ ಆಗಮಿಸಲಿದೆ. ತಕ್ಷಣ ತಾತ್ಕಾಲಿಕ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಿ ಹೇಳುತ್ತೇನೆ ಎಂದು ಮೋದಿ ಭರವಸೆ ನೀಡಿದ್ದಾರೆ. ನೋಡೋಣ, ಅವರು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.

      ಈ ವೇಳೆ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ ಜೋಷಿ, ಶಾಸಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ ಹಾಗೂ ಗೋವಿಂದ ಎಂ. ಕಾರಜೋಳ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap