ಬೆಂಗಳೂರು:
ಸಂಪುಟ ವಿಸ್ತರಣೆ ಕುರಿತು ಸಮಸ್ಯೆಗಳ ಬಗ್ಗೆ ಚರ್ಚಿಸಲು, ಪರಿಹಾರ ಕಂಡುಕೊಳ್ಳಲು, ಶಾಸಕರ ಕೋಪವನ್ನು ಶಮನ ಮಾಡಲು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷವಾಗಲಿ ಇತರ ಪಕ್ಷಗಳ ಶಾಸಕಾಂಗ ಪಕ್ಷದ ಸಭೆಯಲ್ಲಿ ಇತರ ಪಕ್ಷಗಳ ನಾಯಕರು ಭಾಗವಹಿಸುವುದಿಲ್ಲ. ಆದರೆ, ಸರಕಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಆಡಳಿತ ನಡೆಸುತ್ತಿರುವುದರಿಂದ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಸಂಪರ್ಕಿಸಿ, ಕಾಂಗ್ರೆಸ್ ನಾಯಕರಲ್ಲಿ ಕಾಣಿಸಿಕೊಂಡಿರುವ ಅಸಮಾಧಾನ ಮತ್ತು ಕೆಲ ಆಡಳಿತಾತ್ಮಕ ಗೊಂದಲಗಳನ್ನು ಕುಮಾರಸ್ವಾಮಿಯವರೇ ಶಮನ ಮಾಡಲಿ ಎಂಬ ಉದ್ದೇಶದಿಂದ ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ಸಭೆಗೆ ಆಹ್ವಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಬೆಳಗಾವಿ ಅಧಿವೇಶನಕ್ಕೆ ಸಂಬಂಧಪಟ್ಟಂತೆ ಪ್ರಮುಖ ವಿಷಯಗಳನ್ನು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/karnataka-govt-formation-75.gif)