ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ!

ಬೆಂಗಳೂರು :

       ಈಗಾಗಲೇ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕೊಂಡಿರುವ ಮೈತ್ರಿ ಸರ್ಕಾರಕ್ಕೆ ಇದೀಗ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಬಿಗ್ ಶಾಕ್ ನೀಡಿದ್ದಾರೆ. 

      ಇಂದು ಬೆಳಿಗ್ಗೆ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಸ್ಪೀಕರ್ ಮನೆಯಲ್ಲಿ ಇಲ್ಲದ ಕಾರಣ ರಾಜೀನಾಮೆ ಬಗ್ಗೆ ಅವರು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

       ಮೈತ್ರಿ ಸರ್ಕಾರ ರಚನೆಯಾದ ಪ್ರಾರಂಭದಲ್ಲೇ ಸಚಿವ ಸ್ಥಾನಕ್ಕಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಜಿಂದಾಲ್ ಭೂಮಿ ವಿಚಾರದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದರು. 

      ಜಿಂದಾಲ್ ಗೆ ಭೂಮಿ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅವರು ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ, ಜಿಂದಾಲ್ ವಿರುದ್ಧ ಹೋರಾಟ ಮುಂದುವರೆಸುತ್ತೇನೆ ಎಂದು ಘೋಷಿಸಿದ್ದರು. ಇದರ ಹಿಂದೆ ಆಪರೇಷನ್ ಕಮಲ ನಡೆದಿರುವ ಸಾಧ್ಯತೆ ಇದೆ. ಬಿಜೆಪಿ ನಾಯಕರ ಕೈವಾಡದ ಭಾಗವಾಗಿಯೇ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದೀಗ ಅವರು ರಾಜೀನಾಮೆ ನೀಡಲು ನಿಖರವಾದ ಕಾರಣ ತಿಳಿದುಬಂದಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap