ಧಾರವಾಡ:
ನಿರ್ಮಾಣ ಹಂತದ ಏಳು ಅಂತಸ್ತಿನ ಕಾಂಪ್ಲೆಕ್ಸ್ ಕಟ್ಟಡ ಕುಸಿದು ಬಿದ್ದು, ಕಟ್ಟಡದಡಿ ನೂರಕ್ಕೂ ಅಧಿಕ ಮಂದಿ ಸಿಲುಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ಕಟ್ಟಡ ಇದೆಂದು ಹೇಳಲಾಗಿದ್ದು, ನೋಡ ನೋಡುತ್ತಿದ್ದಂತೆ ಬೃಹತ್ ಕಾಂಪ್ಲೆಕ್ಸ್ ಕುಸಿದು ಬಿದ್ದಿದೆ. 4 ಮಹಡಿಗಳ ಈ ಕಟ್ಟಡದಲ್ಲಿ ಸುಮಾರು 60-70 ಅಂಗಡಿಗಳಿದ್ದವರು ಎನ್ನಲಾಗಿದೆ. ಇನ್ನು ಕೆಲ ಹೊತ್ತಿನಲ್ಲಿ ಸ್ಪಷ್ಟ ಚಿತ್ರಣ ತಿಳಿದು ಬರಲಿದೆ.
ಕಳಪೆ ಕಾಮಗಾರಿಯೇ ಕಟ್ಟಣ ಬೀಳಲು ಕಾರಣ ಎಂದು ತಿಳಿದು ಬಂದಿದ್ದು, ಅವಶೇಷಗಳಡಿ ಸಿಲುಕಿಬಿದ್ದ ಕೆಲ ಗಾಯಾಳುಗಳನ್ನು ರಕ್ಷಿಸಿ ಈಗ ಆಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/12729a656c8965c8fed16101f6e.gif)