ಹಿರಿಯ ನಟ ಗಂಗಾಧರಯ್ಯ ಕೊರೋನಾಗೆ ಬಲಿ!!

ಬೆಂಗಳೂರು :

     ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಹುಲಿವಾನ್ ಗಂಗಾಧರಯ್ಯ ಬೆಂಗಳೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

      ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಂಗಾಧರಯ್ಯ ಅವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹಾಗಾಗಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

    ಸುಮಾರು 55 ವರ್ಷ ರಂಗಸೇವೆಯಲ್ಲಿ ತೊಡಗಿದ್ದ ಅವರು, ಹಲವು ಸಿನಿಮಾಗಳಲ್ಲಿಯೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ‘ಮುಕ್ತ ಮುಕ್ತ’ ಧಾರಾವಾಹಿಯಲ್ಲಿನ ಅವರ ನಟನೆ ಮನೆ ಮನೆ ಮಾತಾಗಿತ್ತು.

     ತುಮಕೂರು ಜಿಲ್ಲೆ ಕುಣಿಗಲ್‌ನ ಹುಲಿವಾನ ನಿವಾಸಿಯಾಗಿದ್ದ ಅವರು, ತೆಂಗು ಬೆಳೆಗಾರರೂ ಆಗಿದ್ದರು. ಕೃಷಿಯಲ್ಲಿ ಗಂಭೀರವಾಗಿ ತೊಡಗಿಸಿಕೊಂಡಿದ್ದರು. ಹಲವು ಪ್ರಶಸ್ತಿಗಳು ಅವರನ್ನು ಅರಸಿ ಬಂದಿದ್ದವು. ಅವರಿಗೆ ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link
Powered by Social Snap