ಕಲಬುರಗಿ:
ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಗಳನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಮಾರುತಿ(45),ಶಾರದಾಬಾಯಿ(35)ಮೃತ ದಂಪತಿಗಳು. ಮೃತ ದಂಪತಿಗೆ ಜನ ಪುತ್ರಿಯರು, ಓರ್ವ ಪುತ್ರನಿದ್ದು, ಕೆಲ ದಿನಗಳ ಹಿಂದೆ ಒಬ್ಬ ಮಗಳೊಂದಿಗೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಯುವಕನ ವಿರುದ್ಧ ಮಾರುತಿ ದೇವಲಾ ಪೊಲೀಸರಿಗೆ ದೂರು ಸಹ ನೀಡಿದ್ದರು ಎನ್ನಲಾಗಿದೆ. ಇದೇ ದ್ವೇಷದಿಂದ ತಂದೆ-ತಾಯಿ ಇಬ್ಬರನ್ನೂ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Murder.gif)