ಕಾವೇರಿ ತೀರ್ಥೋದ್ಭವ ; ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!!

ಮಡಿಕೇರಿ :

     ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಬರುವ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಇರುವುದರಿಂದ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಿಸಲು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಭಕ್ತ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡು ಕೋವಿಡ್ ಮುಕ್ತರಾಗಿದ್ದೇವೆ ಎಂದು ವೈದ್ಯರಿಂದ ಸರ್ಟಿಫಿಕೆಟ್ ತಂದರೆ ಮಾತ್ರ ತಲಕಾವೇರಿಗೆ ಪ್ರವೇಶ. ಇಲ್ಲದಿದ್ದರೆ ಪ್ರವೇಶ ಇಲ್ಲ ಎಂಬುದನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಸೀಮಿತ ಜನರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸ್ಥಳೀಯರು ತೀರ್ಥೋದ್ಭವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಕಾವೇರಿ ದರ್ಶನ ಮಾಡಬೇಕು. ತೀರ್ಥಪ್ರೋಕ್ಷಣೆ ಮಾಡಿಕೊಳ್ಳಲು ಕಲ್ಯಾಣಿಗೆ ಜನ ಇಳಿಯುವಂತಿಲ್ಲ. ಅರ್ಚಕರೇ ತೀರ್ಥ ಪ್ರೋಕ್ಷಣೆ ಮಾಡಲಿದ್ದಾರೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಭಕ್ತರು ಬರುತ್ತಾರೆ.

     ಕಾವೇರಿ ತೀರ್ಥೋದ್ಭವ ಮತ್ತು ತುಲಾ ಸಂಕ್ರಮಣ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಕೊಡಗಿನ ಕುಲದೇವತೆ ಮಾತೆ ಕಾವೇರಿ ತುಲಾ ಸಂಕ್ರಮಣದಂದು ಅ.17ರಂದು ಬೆಳಗ್ಗೆ  7 ಗಂಟೆ 3 ನಿಮಿಷಕ್ಕೆ ಕಾವೇರಿ ಮಾತೆ ಉದ್ಭವವಾಗಲಿದ್ದು, ತೀರ್ಥರೂಪದಲ್ಲಿ ದರ್ಶನ ನೀಡಲಿದ್ದಾಳೆ.

     ಈಗಾಗಲೇ ತೀರ್ಥೋದ್ಭವ ಸಂಬಂತ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ತಲಕಾವೇರಿ ಮತ್ತು ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿಯ ವಿವಿಧ ಅಧಿಕಾರಿಗಳು ಸಭೆ ನಡೆಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap