ತಿರುಮಲ:
ವಿಶ್ವಪ್ರಸಿದ್ಧ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ 50 ಅರ್ಚಕರ ಪೈಕಿ 15 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ.
ದೇಶಾದ್ಯಂತ ತೀವ್ರವಾಗಿ ಜನರನ್ನು ಕಂಗೆಡಿಸಿರುವ ಕೋವಿಡ್ 19 ಮಹಾಮಾರಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮತ್ತೊಂದೆಡೆ ಪುರಾಣ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದ 15 ಮಂದಿ ಅರ್ಚಕರಿಗೆ ಕೋವಿಡ್ 19 ಸೋಂಕು ತಗುಲಿದೆ.
ಈ ಹಿನ್ನೆಲೆಯಲ್ಲಿ ದೇವರ ದರ್ಶನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವಂತೆ ಕೋರಿ ಟಿಟಿಡಿ ಸಿಬ್ಬಂದಿ ಮತ್ತು ಕೆಲಸಗಾರರ ಏಕೀಕೃತ ಒಕ್ಕೂಟ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದೆ. ಈ ಬಗ್ಗೆ ಚರ್ಚಿಸಲು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (ಟಿಟಿಡಿ) ತುರ್ತು ಸಭೆ ನಡೆಸಲು ನಿರ್ಧರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Thirupathi.jpg)