ಕೊಪ್ಪಳ:
ಕನೆಕ್ಷನ್ ಕಟ್ ಆಗಿದ್ದ ವಿದ್ಯುತ್ ವೈರ್ ತುಳಿದು ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಹುಲಿಗಿ ಎಂಬ ಗ್ರಾಮದಲ್ಲಿ ನಡೆದಿದೆ.
215 ರೂಪಾಯಿ ವಿದ್ಯುತ್ ಬಿಲ್ ಕಟ್ಟಿಲ್ಲ ಎಂದು ತಾಲೂಕಿನ ಹುಲಿಗಿ ಗ್ರಾಮದ 3ನೇ ವಾರ್ಡ್ ನಿವಾಸಿ ರಾಜಸಾಬ ನರೆಗಲ್ ಗರ್ಜಿನಾಳ ನಿವಾಸಕ್ಕೆ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂನವರು ಮಾಡಿದ್ದಾರೆ. ಈ ವೇಳೆ ಮೀಟರ್ ವೈರ್ ಕಟ್ ಮಾಡಿ ಹೋಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಕಾರಣ ವೈರ್ ನೇತುಬಿದ್ದಿದೆ. ಈ ವೇಳೆ ಕಿರ್ಲೋಸ್ಕರ್ ಕಂಪನಿಯಲ್ಲಿ ಉದ್ಯೋಗಿ ಆಗಿರುವ ಮಹ್ಮದ್ ಅಲೀ ಮನೆಗೆ ಬಂದಿದ್ದು, ನೇತುಬಿದ್ದಿದ್ದ ವಿದ್ಯುತ್ ವೈರ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಕೃತ್ಯಕ್ಕೆ ಜೇಸ್ಕಾಂ ಅಧಿಕಾರಿಗಳೆ ಕಾರಣ. ಕೇವಲ 215 ರೂಪಾಯಿಗೆ ಬಡವರ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡುವ ಜೆಸ್ಕಾಂನವರು ಕೋಟ್ಯಾಂತರ ರೂಪಾಯಿ ಶುಲ್ಕ ಕಟ್ಟದ ಶ್ರೀಮಂತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದ್ದು, ಮೃತನ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗದ ಜೊತೆಗೆ ಘಟನೆಗೆ ಕಾರಣರಾದ ಅಧಿಕಾರಿ, ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಮುನಿರಾಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
