ಬೈಕ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ!!

ವಿಜಯಪುರ :

      ಬೈಕ್ ಮುಟ್ಟಿದ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ದೊಣ್ಣೆಗಳಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

     ದಲಿತ ಸಮುದಾಯಕ್ಕೆ ಸೇರಿದ ಕಾಶೀನಾಥ ತಳವಾರ(28) ಹಲ್ಲೆಗೊಳಗಾದ ಯುವಕ.  ವಿಜಯಪುರದ ತಾಳಿಕೋಟೆಯ ಮಿನಾಜಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿದೆ.

      ಹಲ್ಲೆಗೊಳಗಾದ ವ್ಯಕ್ತಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಮೇಲ್ವರ್ಗದವರಿಗೆ ಸೇರಿದ ಬೈಕ್ ಮುಟ್ಟಿದ ಎಂಬ ಕಾರಣಕ್ಕೆ ಸುಮಾರು 13 ಮಂದಿ ದಲಿತ ವ್ಯಕ್ತಿ ಹಾಗೂ ಅವರ ಕುಟುಂಬದವರ ಮೇಲೆ ಯುವಕನಿಗೆ ಪಾದರಕ್ಷೆ, ಕೋಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ತಾಳಿಕೋಟೆ ಪೊಲೀಸರು ತಿಳಿಸಿದ್ದಾರೆ.

      ಹಲ್ಲೆಗೊಳಗಾದ ಯುವಕನನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap