ದಾವಣಗೆರೆ :
ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ವಿಕಲಚೇತನರಿಗೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ.
ರುಕ್ಸಾನ (40) ಆತನ ಮಗ ಸಲೀಂ(10)ಮೃತ ದುರ್ದೈವಿಗಳು. ಉತ್ತರ ಪ್ರದೇಶದಿಂದ ಬಂದಿರುವ ಇವರ ಕುಟುಂಬದವರು ದಾವಣಗೆರೆಯಲ್ಲಿ ವಾಸವಾಗಿದ್ದಾರೆ. ದಿನವೂ ಬೆಳಗ್ಗೆ ವಿವಿಧ ಪಟ್ಟಣ ಹಾಗೂ ಗ್ರಾಮಗಳಿಗೆ ಹೋಗಿ ಭಿಕ್ಷೆ ಬೇಡಿ ಸಂಜೆ ದಾವಣಗೆರೆಗೆ ವಾಪಸಾಗುತ್ತಾರೆ.
ತಾಯಿ – ಮಗ ಇಬ್ಬರೂ ಹೊಟ್ಟೆ ಹಸಿವು ನೀಗಿಸಿಕೊಳ್ಳಲು ಭಿಕ್ಷೆ ಬೇಡುತ್ತ ಊರೂರು ಅಲೆಯುತ್ತಿದ್ದರು. ಅದೇ ರೀತಿ ಬುಧವಾರ ಬೆಳಗ್ಗೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮಕ್ಕೂ ಬಂದಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಮನಿಷಾ ಮತ್ತು ಅನಂತಸೇನ ಎಂಬುವರ ಮೇಲೆ ಕ್ರೇನ್ ಹರಿದಿದ್ದು, ಪರಿಣಾಮ ಅವರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ