ಕಲಬುರಗಿ : ನಾಪತ್ತೆಯಾಗಿದ್ದ ಬಾಲಕ‌ನ ಶವ ಭೀಮಾನದಿಯಲ್ಲಿ ಪತ್ತೆ

ಕಲಬುರಗಿ :

     ನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು- ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ.

      ಮೃತ ಬಾಲಕನನ್ನು ನರಿಬೋಳ ಗ್ರಾಮದ ಮಹೇಶ್(14) ಎಂದು ಗುರುತಿಸಲಾಗಿದೆ. ಕಳೆದ 3 ದಿನಗಳ ಹಿಂದೆ ಮಹೇಶ್ ಗ್ರಾಮದಿಂದ ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಆತನ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

     ದುಷ್ಕರ್ಮಿಗಳು ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿ ಗೋಣಿಚೀಲದಲ್ಲಿ ಹಾಕಿ ಶವವನ್ನು ಭೀಮಾ ನದಿಗೆ ಎಸೆದಿದ್ದು, ಶುಕ್ರವಾರ ಶವ ಪತ್ತೆಯಾಗಿದೆ.

     ನರಿಬೋಳ ಗ್ರಾಮದ ಮಹೇಶ್‌ ಇದೇ ಗ್ರಾಮದ ಅನ್ಯ ಕೋಮಿನ ತನಗಿಂತ ಹಿರಿಯ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದ್ದರಿಂದಲೇ ಯುವತಿಯ ಕುಟುಂಬಸ್ಥರು ಮಹೇಶನನ್ನು ಅಪಹರಿಸಿ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ.

      ಶುಕ್ರವಾರ ಅಪರಿಚಿತ ಶವ ಪತ್ತೆಯಾಗಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಇದು ಅಪರಿಚಿತ ಶವವಲ್ಲ. ನರಿಬೋಳ ಗ್ರಾಮದ ಮಹೇಶ್ ನದು ಎಂದು ಖಾತರಿಯಾಗಿದೆ.

      ಸಂಶಯಾಸ್ಪದ ಹಿನ್ನೆಲೆಯಲ್ಲಿ ಮೆಹೆಬೂಬ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap