ತೋಟದ ಮನೆಯಲ್ಲೇ ಎಸ್.ಎಲ್.ಧರ್ಮೇಗೌಡರ ಅಂತ್ಯಕ್ರಿಯೆ!!

ಚಿಕ್ಕಮಗಳೂರು :

      ನಿನ್ನೆ ಸಂಜೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಮಂದಿ ಅಂತಿಮ ನಮನ ಸಲ್ಲಿಸಿದರು.

      ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ಧರ್ಮೇಗೌಡ ಅವರ ಅಂತ್ಯಕ್ರಿಯೆ ಅವರ ನೆಚ್ಚಿನ ತೋಟದ ಮನೆಯಲ್ಲಿ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ಸಖರಾಯಪಟ್ಟಣದ ಜೂನಿಯರ್ ಕಾಲೇಜಿನ ಆವರಣದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಥಿವ ಶರೀರದ ದರ್ಶನಕ್ಕೆ ರಾಜಕೀಯ ಗಣ್ಯರು ಹಾಗೂ ಸಾರ್ವಜನಿಕರು ಕಾದು ಕುಳಿತಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಮಾಧುಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಪಾಟೀಲ್, ಸಿ.ಟಿ ರವಿ ಸೇರಿದಂತೆ ಹಲವು ಜನ ಗಣ್ಯರು ಭಾಗಿಯಾಗಿದ್ದಾರೆ.

      ಇದೇ ವೇಳೆ ಅಂತಿಮ ದರ್ಶನಕ್ಕೆ ಹಲವಾರು ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.  ಧರ್ಮೇಗೌಡರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕರದಿಂದ ಅಧಿಸೂಚನೆ ಹೊರಟಿದೆ.

      ಫಾರಂ ಮನೆಯಲ್ಲಿ ನೀರವ ಮೌನ ಆವರಿಸಿದೆ. ಅವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಮನೆಯ ಆವರಣಕ್ಕೆ ಆಗಮಿಸಿ ದುಃಖಪಡುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap