ಬೆಂಗಳೂರು :
ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪೊಲೀಸರು
ಎಫ್ಐಆರ್ ದಾಖಲಿಸಿದ್ದಾರೆ.
ಅಬ್ಬಾಸ್, ಫಿರೋಜ್, ಮುಜ್ಮೀಲ್, ಹಬೀಬ್ , ಪೀರ್ ಪಾಷಾ ಸೇರಿ ಒಟ್ಟು 17 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143,147,148 ,353, 333, 323, 436, 427, 148 ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ-1984 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇನ್ನು, ಸಾಮಾಜಿಕ ಜಾಲತಾಣ ದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡಮೂರ್ತಿ ಶ್ರೀನಿವಾಸ್ ಅವರ ಅಕ್ಕನ ಮಗ ನವೀನ್ ವಿರುದ್ಧ ಫಿರ್ದೋಷ್ ಪಾಷಾ ಎಂಬುವವರು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈಗಾಗಲೇ ನವೀನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡಮೂರ್ತಿ ಶ್ರೀನಿವಾಸ್ ಅವರ ಅಕ್ಕನ ಮಗ ನವೀನ್ ವಿರುದ್ಧಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು.
ಸುಮಾರು 600ಕ್ಕಿಂತ 800 ಮಂದಿ ಜನರು ಮಾರಾಕಾಸ್ತ್ರಗಳಿಂದ ಠಾಣೆಗೆ ನುಗ್ಗಿ, ಫೇಸ್ ಬುಕ್ ಪೋಸ್ಟ್ ಮಾಡಿದ್ದ ನವೀನ್ ನನ್ನು ಪೊಲೀಸರು ಸಾಯಿಸಲು ಬಿಡುತ್ತಿಲ್ಲ, ಹಾಗಾಗಿ ಕೈಗೆ ಸಿಕ್ಕ ಪೊಲೀಸರನ್ನು ಕೊಚ್ಚಿ ಹಾಕಿ ಎಂದು ಬೆದರಿಕೆ ಹಾಕಿದ್ದರು ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/bangalore-kg-hali.jpg)