ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ತನಿಖೆಗೆ NIA ಎಂಟ್ರಿ!!

ಬೆಂಗಳೂರು :

    ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರವೇಶ ಕೊಟ್ಟಿದ್ದು, ಗಲಭೆಯ ಬಗ್ಗೆ ಮಾಹಿತಿ ಕಲೆ ಹಾಕಿದೆ.

     ಗಲಭೆಯಲ್ಲಿ ಸಾವನ್ನಪ್ಪಿದ ಮೂವರು ವ್ಯಕ್ತಿಗಳ ಪ್ರಕರಣ ಹಾಗೂ ಮೃತರ ಹಿನ್ನೆಲೆ, ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಇಟ್ಟ ಆರೋಪಿಗಳ ಹಿನ್ನೆಲೆ, ಹಾಗೆ ಈಗಾಗಲೇ ಬಂಧಿತರಾಗಿರುವ ಎಸ್‍ಡಿಪಿಐ ಸಂಘಟನೆ ಸದಸ್ಯರ ಮಾಹಿತಿ ಕಲೆ ಹಾಕಿ ಎನ್‍ಐಎ ತನಿಖೆ ನಡೆಸುತ್ತಿದೆ.

     ಈಗಾಗಲೇ ಡಿಜೆ ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಾಗೂ ಡಿ.ಜೆ ಹಳ್ಳಿ ಪೊಲೀಸರು ಆರೋಪಿಗಳ ಪ್ರಾಥಮಿಕ ಮಾಹಿತಿಯನ್ನು ಎನ್ ಐಎ ಗೆ ನೀಡಿದ್ದಾರೆ.

    ಆರೋಪಿಗಳು ಎಸ್ ಡಿಪಿಐನ ಕಾರ್ಯಕರ್ತರು ಇದ್ದಾರೆ ಎನ್ನುವ ಅನುಮಾನವಿದ್ದು, ಆರೋಪಿಗಳು ಭಯೋತ್ಪಾದಕರ ನಂಟಿನ ಬಗ್ಗೆ ಎನ್ ಐಎ ಮಾಹಿತಿ ಕಲೆ ಹಾಕುತ್ತಿದೆ ಎನ್ನಲಾಗಿದೆ.
      ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 300 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಪ್ರತಿಯೊಬ್ಬರ ಹಿನ್ನೆಲೆ ಕಲೆ ಹಾಕಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap