ಬೆಂಗಳೂರು :
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರವೇಶ ಕೊಟ್ಟಿದ್ದು, ಗಲಭೆಯ ಬಗ್ಗೆ ಮಾಹಿತಿ ಕಲೆ ಹಾಕಿದೆ.
ಗಲಭೆಯಲ್ಲಿ ಸಾವನ್ನಪ್ಪಿದ ಮೂವರು ವ್ಯಕ್ತಿಗಳ ಪ್ರಕರಣ ಹಾಗೂ ಮೃತರ ಹಿನ್ನೆಲೆ, ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಇಟ್ಟ ಆರೋಪಿಗಳ ಹಿನ್ನೆಲೆ, ಹಾಗೆ ಈಗಾಗಲೇ ಬಂಧಿತರಾಗಿರುವ ಎಸ್ಡಿಪಿಐ ಸಂಘಟನೆ ಸದಸ್ಯರ ಮಾಹಿತಿ ಕಲೆ ಹಾಕಿ ಎನ್ಐಎ ತನಿಖೆ ನಡೆಸುತ್ತಿದೆ.
ಈಗಾಗಲೇ ಡಿಜೆ ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಾಗೂ ಡಿ.ಜೆ ಹಳ್ಳಿ ಪೊಲೀಸರು ಆರೋಪಿಗಳ ಪ್ರಾಥಮಿಕ ಮಾಹಿತಿಯನ್ನು ಎನ್ ಐಎ ಗೆ ನೀಡಿದ್ದಾರೆ.
![](https://prajapragathi.com/wp-content/uploads/2020/09/Dj-halli-NIA.jpg)