ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ : ಡಿಕೆಶಿಗೆ ಸಂಶಯ..!!

ಬೆಂಗಳೂರು:

      ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ ಸುದ್ದಿ ಕೇಳಿ ನನಗೆ ಆಶ್ಚರ್ಯವಾಯ್ತು, ಅವರ ಸಾವಿನ ಬಗ್ಗೆ ತನಿಖೆ ಅಗತ್ಯವಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

      ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತಾ, ನನಗೆ ಅವರು ಬಹಳ ಹತ್ತಿರದಿಂದ ಪರಿಚಯ. ಅವರು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡ ಆಸ್ತಿಯಾಗಿದ್ದರು. ನಿನ್ನೆ ರಾತ್ರಿ ಅವರ ನಿಧನ ಸುದ್ದಿ ಕೇಳಿ ಆಶ್ಚರ್ಯವಾಯ್ತು. ಅವರ ನಿಧನ ಸ್ವಾಭಾವಿಕಾನಾ..ಅವರು ನಿಧನರಾಗಿದ್ದು ಯಾಕೆ? ಅವರಿಗೆ ಏನಾಯ್ತು ಅನ್ನೋದು ತಿಳಿಯಬೇಕಾಗಿದ್ದು, ಅವರ ಸಾವಿನ ಬಗ್ಗೆ ತನಿಖೆ ಅಗತ್ಯವಿದೆ ಎಂದು ಹೇಳಿದ್ದಾರೆ.

      ಖ್ಯಾತ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರ ಮಧುಕರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. 

      ಮಧುಕರ್ ಶೆಟ್ಟಿ ಅವರು ಹೈದರಾಬಾದ್ ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಧುಕರ್ ಅವರು ಪತ್ನಿ, ಮಗಳು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಧೈರ್ಯ ಕೊಡಲಿ ಅಂತ ಡಿಕೆಶಿ ಸಂತಾಪ ಸೂಚಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap