ಬೆಂಗಳೂರು:
ಈಗ ಯಾರಿಗೂ ಚುನಾವಣೆ ಬೇಕಾಗಿಲ್ಲ. ನಾನೇ ರಾಜೀನಾಮೆ ಕೊಟ್ರು ಸರ್ಕಾರಕ್ಕೆ ಏನೂ ಆಗಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ.ಶಿವಕುಮಾರ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.
ಆಪರೇಷನ್ ಕಮಲ ಹಾಗೂ ಶಾಸಕ ಆನಂದ್ ಸಿಂಗ್ ರಾಜೀನಾಮೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಇನ್ನೂ”ಸರ್ಕಾರ ನಡೆಸುವುದು ಹುಡುಗಾಟಿಕೆ ಅಲ್ಲ, ಚುನಾವಣೆಯಲ್ಲಿ ಗೆಲ್ಲೋದು ಅಷ್ಟು ಸಲಭವಲ್ಲ. ಈಗ ಯಾರಿಗೂ ಚುನಾವಣೆ ಬೇಕಾಗಿಲ್ಲ. ನಾನೇ ರಾಜೀನಾಮೆ ಕೊಟ್ರು ಸರ್ಕಾರಕ್ಕೆ ಏನೂ ಆಗೋಲ್ಲ. ಇನ್ನೂ ಆನಂದ್ ಸಿಂಗ್ ಯಾಕಾಗಿ ರಾಜೀನಾಮೆ ಕೊಟ್ರೋ ನನಗಂತು ಗೊತ್ತಿಲ್ಲ. ಕೆಲವರಿಗೆ ಹೊಟ್ಟೆ ನೋವು ಇರುತ್ತೆ ಆದರೆ, ಎಲ್ಲಾ ಟೈಮಲ್ಲೂ ಅಪರೇಷನ್ ಸಕ್ಸಸ್ ಆಗಲ್ಲ” ಎಂದು ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
‘ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ನೋಡಿದೆ. ನಂಬಲಿಕ್ಕೆ ಸಾಧ್ಯ ಆಗುತ್ತಿಲ್ಲ. ಅವರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ ಅಂತಾ ಹೇಳಿದ್ದರು. ಆದರೆ ವೈಯಕ್ತಿಕವಾಗಿ ಏನೇನು ಸಮಸ್ಯೆ ಇದ್ದವೋ ಗೊತ್ತಿಲ್ಲ. ಈ ಸಮಸ್ಯೆಗಳ ಬಗ್ಗೆ ಹೇಳುತ್ತಿಲ್ಲ. ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಿಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ನಾನು ಅವರನ್ನು ಭೇಟಿಯಾಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
