ನವದೆಹಲಿ :
ಡಿ.ಕೆ ಶಿವಕುಮಾರ್ ಅವರ ಐಶ್ವರ್ಯ ಅವರಿಗೆ ಸೆಪ್ಟೆಂಬರ್ 12 ರ ಗುರುವಾರದಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ.
ಐಶ್ವರ್ಯ ಸ್ವತಂತ್ರವಾಗಿ ವ್ಯಾಪಾರ ಮಾಡುವ ಉದ್ದೇಶದಿಂದ ಸೋಲ್ ಸ್ಪೇಸ್ ಅರೇನಾದಲ್ಲಿ ಶೇ.50ರಷ್ಟು ಷೇರು ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾಳೆ. ಇದಕ್ಕಾಗಿ ಆಕೆ, ರಿಯಲ್ ಎಸ್ಟೇಟ್ ಪ್ರಾಪರ್ಟಿಗಳಲ್ಲಿ ಷೇರು ಖರೀದಿಸಿ, ಪ್ರತ್ಯೇಕವಾಗಿ ರಿಯಲ್ ಎಸ್ಟೇಟ್ ಬಿಸಿನೆಸ್ ಆರಂಭಿಸಿದ್ದಾಳೆ. ಅದಕ್ಕೆ ಐಟಿ ರಿಟರ್ನ್ ಸಲ್ಲಿಸುತ್ತಿದ್ದಾಳೆ,’ ಎಂದು ಡಿ.ಕೆ ಶಿವಕುಮಾರ್ ಐಟಿ ವಿಚಾರಣೆ ವೇಳೆಯಲ್ಲಿ ಐಟಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದರು. ಆದರೆ, ಮಗಳು ಕೋಟ್ಯಂತರ ರೂ. ಸಾಲ ಪಡೆದಿರುವುದಕ್ಕೆ ಪ್ರತಿಯಾಗಿ ಭದ್ರತೆ ರೂಪದಲ್ಲಿ ನೀಡಿರುವ ಸ್ವತ್ತು ಅಥವಾ ಗ್ಯಾರಂಟಿ ಕುರಿತು ಮಾಹಿತಿ ನೀಡಿಲ್ಲ ಹೀಗಾಗಿ ಈಗ ಇಡಿ ವಿಚಾರಣೆಗೆ ಬರುವಂತೆ ಹೇಳಿದೆ.
ಐಶ್ವರ್ಯ ಅವರ ಹೆಸರಿನಲ್ಲಿ ಸೋಲ್ ಅಂಡ್ ಸೇಲ್ಸ್ ನಲ್ಲಿ 78 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಈ ಮೊತ್ತವನ್ನು ನನ್ನ ಹಿತೈಷಿಗಳು, ಕುಟುಂಬದವರು, ಸ್ನೇಹಿತರು ಕೊಟ್ಟ ಹಣ ಎಂದು ಡಿಕೆಶಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ನ್ಯಾಷನಲ್ ಗ್ಲೋಬಲ್ ಕಾಲೇಜಿನಲ್ಲಿ ಐಶ್ವರ್ಯಾ ಟ್ರಸ್ಟಿಯಾಗಿದ್ದಾರೆ.
ಸೋಲ್ ಅಂಡ್ ಸೇಲ್ಸ್ ಯೋಜನೆಯ ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಹೂಡಿಕೆ ಮಾಡಿರುವ ಹಣ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿದೆ ಎನ್ನಲಾಗಿದೆ. ಅಲ್ಲದೇ ಬೇರೆ ಬೇರೆ ಮೂಲಗಳಿಂದ ಸಂಗ್ರಹ ಮಾಡಿರುವ ಅನುಮಾನ ಕೂಡ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ಆದ್ದರಿಂದ ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಇಡಿ ಸಮನ್ಸ್ ನೀಡಿದೆ
ಡಿ.ಕೆ.ಶಿವಕುಮಾರ್ ಅವರ ಬಂಧನದ ಅವಧಿ ಇದೇ 13 ರಂದು ಮುಕ್ತಾಯವಾಗುತ್ತಿರುವುದರಿಂದ 12 ರಂದೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿರುವುದು ವಿಶೇಷವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/dkshivakumar-Aishwarya.gif)