ಕಂಪನಿಯಲ್ಲಿ ಕಳ್ಳತನ : ವಿಚಾರಣೆಗೆ ಹೆದರಿ ನೌಕರ ಆತ್ಯಹತ್ಯೆ!!!

ಮೈಸೂರು:

      ಕಂಪನಿಯೊಂದರಲ್ಲಿ ಕಳ್ಳತನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರ ವಿಚಾರಣೆಗೆ ಹೆದರಿ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

      ಮೈಸೂರಿನ ಹೊರವಲಯದಲ್ಲಿರುವ ಹೂಟಗಳ್ಳಿಯ ಸ್ಪೆಕ್ಟ್ರಾ ಪೈಪ್ಸ್ ಕಂಪನಿ ಉದ್ಯೋಗಿ ಹರೀಶ್ ಕುಮಾರ್ (42) ಆತ್ಮಹತ್ಯೆಗೆ ಶರಣಾದ ನೌಕರ.

      ಕೆಲವು ದಿನಗಳ ಹಿಂದೆ ಸ್ಪೆಕ್ಟ್ರಾ ಪೈಪ್‌ ಕಂಪೆನಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪದಾರ್ಥಗಳ ಕಳ್ಳತನವಾಗಿತ್ತು. ಉದ್ಯೋಗಿ ಹರೀಶ್ ಕುಮಾರ್ ಅವರೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈಗ ಹಠಾತ್ ಬೆಳವಣಿಗೆಯಲ್ಲಿ ಹರೀಶ್ ದೇಹ ನೇಣು ಬಿಗಿದಿರುವ ರೀತಿಯಲ್ಲಿ ಪತ್ತೆಯಾಗಿದೆ.

      ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ, ಕಂಪನಿಯಲ್ಲಿ ಕಿರುಕುಳ ನೀಡುತ್ತಿರುವುದಾಗಿ ಹರೀಶ್, ಡೈರಿಯಲ್ಲಿ ಉಲ್ಲೇಖಿಸಿರುವುದಾಗಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap