ಸಮ್ಮಿಶ್ರ ಸರ್ಕಾರದಲ್ಲಿ ಪ್ರಜಾಪ್ರಭುತ್ವಕ್ಕೆ ಬೆಲೆಯೇ ಇಲ್ಲ

  ಬಳ್ಳಾರಿ:

      ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಈ ಸಮ್ಮಿಶ್ರ ಸರ್ಕಾರದಲ್ಲಿ ಪ್ರಜಾಪ್ರಭುತ್ವಕ್ಕೆ ಬೆಲೆಯೇ ಇಲ್ಲದಂತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

      ಬಳ್ಳಾರಿಯಲ್ಲಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಭಾಗವಹಿಸಿದ್ದ ಅವರು, ಸಂಸದೆ ಶೋಭಾ ಕಾರಂದ್ಲಾಜೆ ಅವರ ವಿರುದ್ಧ ಹಗುರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಬಾಲ ಹಿಡಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲೂ ಕೂಡಾ ಹೆಣ್ಣು ಮಕ್ಕಳನ್ನು ಏಕವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಸಿದ್ದು ವಿರುದ್ದ ವಾಗ್ದಾಳಿ ನಡೆಸಿದರು.

      ರಾಜ್ಯದಲ್ಲಿ ಬಿಜೆಪಿಯನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಅವರು, ಸೋನಿಯಾ ಆಗಲೀ.,ರಾಹುಲ್‍ಗಾಂಧಿಯಾಗಲೀ, ಅಥವಾ ಅವರಾಗಲೀ ಅಥವಾ ಅವರಪ್ಪ ರಾಜೀವ್‍ಗಾಂಧಿ ಅವರಾಗಲೀ ಬೆಜೆಪಿಯನ್ನು ಮುಗಿಸಲು ಸಾಧ್ಯವಿಲ್ಲ.  ಇನ್ನು ಈ ಸರ್ಕಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನಾಯಿಬಾಲ ಮುದುರಿದ ಹಾಗೆ ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಪೇಪರ್ ಟೈಗರ್ ಇದ್ದಂತೆ ಇಂತಹ ಹೀನಾಯ ಸ್ಥಿತಿ ಯಾವ ರಾಜಕಾರಣಿಗೂ ಬಾರದಿರಲಿ ಎಂದು ಟೀಕಿಸಿದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap