ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ!

ಮೈಸೂರು :

     ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಮಾಜಿ ಸ್ಪೀಕರ್ ಕೃಷ್ಣ ಅವರು, ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ.

     ಮೈಸೂರಿನ ಕುವೆಂಪುನಗರದ ಅನಿಕೇತನ ರಸ್ತೆಯಲ್ಲಿರುವಂತ ನಿವಾಸದಲ್ಲಿದ್ದ ಮಾಜಿ ಸ್ಪೀಕರ್ ಕೃಷ್ಣ ಅವರು, ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆ ಕೂಡ ಪಡೆಯುತ್ತಿದ್ದರು.  ಚಿಕಿತ್ಸೆಗೆ ಸ್ಪಂದಿಸದ ಕಾರಣ, ಆಸ್ಪತ್ರೆಯಿಂದ ಮನೆಗೆ ಕರೆತಂದು ಚಿಕಿತ್ಸೆ ಮುಂದುವರೆಸಲಾಗಿತ್ತು.

      ಕೃಷ್ಣ ಅವರು,  2006 ರಿಂದ 2008ರವೆರಗೆ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಮೂರು ಬಾರಿ ಕೆ ಆರ್ ಪೇಟೆಯಿಂದ ಜೆಡಿಎಸ್ ಶಾಸಕರಾಗಿ ಗೆದ್ದಿದ್ದರು. ಕೊನೆಯಲ್ಲಿ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿದ್ದರು. 1996ರಲ್ಲಿ ಮಂಡ್ಯ ಸಂಸದರಾಗಿದ್ದರು. ಎಸ್ ಆರ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸಂಪುಟದಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಇಂತಹ ಅವರು ಇಂದು ನಿಧರಾಗಿದ್ದಾರೆ. ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕೊತ್ತಮಾರನಹಳ್ಳಿಯಲ್ಲಿ ಇಂದು ಸಂಜೆ ನೆರವೇರಲಿದೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link
Powered by Social Snap