ವಿನಯ ಕುಲಕರ್ಣಿಗೆ ಡಿ.7ರವರೆಗೆ ಹಿಂಡಲಗಾ ಜೈಲೇ ಗತಿ!

ಧಾರವಾಡ:

     ಜಿ.ಪಂ. ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂದನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.

     ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನವಾಗಿ ಇಂದಿಗೆ 18 ದಿನಗಳೇ ಕಳೆದಿವೆ. ಆರಂಭದಲ್ಲಿ ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು, ಬಳಿಕ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ವಿನಯ ಕುಲಕರ್ಣಿಗೆ ಇಂದು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ. 

    ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಲಯಕ್ಕೆ ವಿನಯ ಕುಲಕರ್ಣಿ ಅವರನ್ನು ಹಾಜರುಪಡಿಸಲಾಯಿತು.

     ವಿಚಾರಣೆ ನಡೆಸಿದ ನ್ಯಾಯಾಧೀಶರು ಸಿಬಿಐ ಅರ್ಜಿಯನ್ನು ಪುರಸ್ಕರಿಸಿ, ವಿನಯ ಕುಲಕರ್ಣಿ ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ, ಆದೇಶ ನೀಡಿದರು. ನ್ಯಾಯಾಲಯದ ಈ ಆದೇಶದಿಂದಾಗಿ ವಿನಯ ಕುಲಕರ್ಣಿ ಡಿ. 7ರವರೆಗೆ ಮತ್ತೆ ಹಿಂಡಲಗಾ ಜೈಲಿನಲ್ಲಿಯೇ ಇರಬೇಕಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link