ಮಂಡಲದ ಹಾವು ಕಡಿತ : ಕಚ್ಚಿದ ಹಾವನ್ನು ಕೊಂದು ಪ್ರಾಣಬಿಟ್ಟ ರೈತ..!

ಮಂಡ್ಯ:  

      ಸಕ್ಕರೆ ಕಾರ್ಖಾನೆಯಲ್ಲಿ  ರೈತ ತನಗೆ ಕಚ್ಚಿದ ಹಾವನ್ನು ಕೊಂದು ಬಳಿಕ ತಾನೂ ಕೊನೆಯುಸಿರೆಳೆದಿರುವ ಘಟನೆ ಮಂಡ್ಯದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ಗುರುವಾರ ನಡೆದಿದೆ.

      ಬೊಮ್ಮಯ್ಯ (48) ಹಾವು ಕಚ್ಚಿ ಮೃತಪಟ್ಟ ವ್ಯಕ್ತಿ. ಬೊಮ್ಮಯ್ಯ ಕೂಲಿಗೆಂದು ಎತ್ತಿನ ಗಾಡಿಯಲ್ಲಿ ಬೇರೆ ರೈತರ ಕಬ್ಬನ್ನು ಮೈಷುಗರ್ ಕಾರ್ಖಾನೆಗೆ ತಂದಿದ್ದರು. ಇಂದು ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಕ್ರೇನ್ ಸಹಾಯದಿಂದ ಕಬ್ಬನ್ನು ಕಾರ್ಖಾನೆಗೆ ಅನ್‍ಲೋಡ್ ಮಾಡುತ್ತಿದ್ದ ವೇಳೆ ಮಂಡಲದ ಹಾವು ಕಚ್ಚಿದೆ. 

      ಮೃತ ಕಾರ್ಮಿಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಸಕ್ಕರೆ ಕಾರ್ಖಾನೆಯಿಂದ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತರ ಆಕ್ರೋಶ:

      ಕಾರ್ಖಾನೆಯಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ ಇಲ್ಲದಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಬಂದಿದ್ದರೆ ರೈತ ಸಾಯುತ್ತಿರಲಿಲ್ಲ ಎಂದು ಆರೋಪಿಸಿ ನೂರಾರು ರೈತರು ಕಾರ್ಖಾನೆ ಬಳಿ ಜಮಾಯಿಸಿದ್ದು, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap