ಬೆಂಗಳೂರು ; ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್​ಗೆ ಬೆಂಕಿ!!

ಬೆಂಗಳೂರು :

    ಜಿಟಿಜಿಟಿ ಮಳೆ ನಡುವೆಯೂ ನಗರದ ಬಸವನಗುಡಿ ಬಳಿಯ ನಟ್ಕಲ್ಲಪ್ಪ ವೃತ್ತದಲ್ಲಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ಹಾಗೂ ಆಪ್ಟಿಕಲ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ಎಂದಿನಂತೆ ಬೆಳಗ್ಗೆ ವ್ಯಾಪಾರ ವಹಿವಾಟನ್ನು ಹೋಟೆಲ್‌ನಲ್ಲಿ ಆರಂಭಿಸಲಾಗಿತ್ತು. ದಶಕಗಳ ಕಾಲದಿಂದ ವಿವಿಧ ಪ್ರದೇಶಗಳ ಜನರು ದೋಸೆ ತಿನ್ನಲು ಇಲ್ಲಿಗೆ ಆಗಮಿಸುತ್ತಿದ್ದರು. ಬೆಂಕಿ ಹೊತ್ತಿಕೊಳ್ಳುವಾಗ ಹಲವು ಜನರು ದೋಸೆ ಸವಿಯುತ್ತಿದ್ದರು. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದ ಕೂಡಲೇ ದೂರ ಹೋದರು. 

     ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿರಬಹುದು ಎಂದು ಅಂದಾಜಿಸಲಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap