ವಿಜಯಪುರ : ಬೆಂಕಿಪೊಟ್ಟಣ ತುಂಬಿದ್ದ ಲಾರಿಗೆ ಬೆಂಕಿ!!

ವಿಜಯಪುರ:

       ಆಕಸ್ಮಿಕ ಬೆಂಕಿ ತಗುಲಿ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದ ಅರಕೇರಿ ತಾಂಡಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಇಂದು ಬೆಳಿಗ್ಗೆ ನಡೆದಿದೆ.

      ಲಾರಿ ತಮಿಳುನಾಡು ಮೂಲದ್ದಾಗಿದ್ದು, ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

      ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪಾರಾಗಿದ್ದಾರೆ. ಅರ್ಧ ಗಂಟೆ ಲಾರಿ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಬಂದ ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 

      ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap