ಬೆಂಗಳೂರು :
ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ತೆರಿಗೆ ರಹಿತ ಡೀಸೆಲ್ ನೀಡುವಂತೆ ಸೂಚಿಸಿದ್ದಾರೆ.
ಬುಧವಾರದಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೋಟಾ ಶ್ರೀನಿವಾಸ ಪೂಜಾರಿ ಬಳಿಕ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು.
ಈ ನಿಯೋಗದ ಬೇಡಿಕೆಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
