ಮೈಸೂರು :
ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿ ಮಾರಾಟ ಮಾಡಿದ್ದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಮ್ಮೆ ಭೂ ಸಂಕಷ್ಟ ಎದುರಾಗಿದೆ.
ಸಿದ್ದರಾಮಯ್ಯ ಅವರು ನಗರಾಭಿವೃದ್ಧಿ ಪ್ರಾಧಿಕಾರದ ನಿಯಾಮಾವಳಿ ಉಲ್ಲಂಘಿಸಿ ಕೃಷಿ ಭೂಮಿಯನ್ನು ಡಿನೋಟಿಫೈ ಮಾಡಿ ಮನೆ ನಿರ್ಮಾಣ ಮಾಡಿದ್ದರು. ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ್ದ ಆರೋಪದ ಮೇಲೆ ಸಿದ್ದರಾಮಯ್ಯ ಮೇಲೆ ವಕೀಲ ಗಂಗಾಧರ್ ಎಂಬುವರು ದೂರು ಸಲ್ಲಿಸಿದ್ದರು.
ಈ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ಸಾಗುತ್ತಿಲ್ಲ ಎಂಬ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವತಃ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಪೊಲೀಸ್ ಆಯುಕ್ತರಿಗೆ ವರದಿಯನ್ನು ಕೂಡ ಕೇಳಿದ್ದರು.
ಪ್ರಕರಣದ ಕುರಿತು ತನಿಖೆ ನಡೆಸಿದ್ದ ಪೊಲೀಸರು ಸರಿಯಾದ ಸಾಕ್ಷಿ ಇಲ್ಲ ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ನೀಡಿದ್ದರು. ಪೊಲೀಸರು ನೀಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರದಾರ ಗಂಗಾಧರ್ ಮೈಸೂರಿನ ಹಿರಿಯ ಶ್ರೇಣಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
