ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಬಿಎಸ್ವೈ-ಸಿದ್ದು!

ಹುಬ್ಬಳ್ಳಿ :

      ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಇಂದು ಮುಖಾಮುಖಿಯಾಗಿ ಭೇಟಿಯಾಗಿ ಪರಸ್ಪರ ಯೋಗ ಕ್ಷೇಮ ವಿಚಾರಿಸಿಕೊಂಡಿದ್ದಾರೆ.

      ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಪ್ರವಾಸದಲ್ಲಿದ್ದಾರೆ. ಇದಕ್ಕಾಗಿ ಇಂದು ಮುಂಜಾನೆಯೇ ಬೆಳಗಾವಿ ಪ್ರವಾಸ ಕೈಗೊಂಡ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾರೆ. ಇತ್ತ ಬಿಎಸ್ ವೈ ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದು, ಅವರೂ ಕೂಡ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.

      ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಭಯ ನಾಯಕರು ನಂತರ ಅಲ್ಲಿಂದ ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದ್ದಾರೆ. ಈ ವೇಳೆ ಮಾಧ್ಯಮದವರು ಬಿಎಸ್‍ವೈ ಅವರನ್ನು ಮಾತನಾಡಿಸಿದಾಗ, ಸಿದ್ದರಾಮಯ್ಯನವರನ್ನ ಮಾತನಾಡಿಸಿ ಎಂದು ಹೇಳಿ ತೆರಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link