ರಾಜಕೀಯಕ್ಕೆ ಅಣ್ಣಾಮಲೈ ಎಂಟ್ರಿ; ಇಂದು ಬಿಜೆಪಿಗೆ ಸೇರ್ಪಡೆ!!

ನವದೆಹಲಿ :

      ಕರ್ನಾಟಕದ ಸಿಂಗಂ ಎನಿಸಿಕೊಂಡ ಖ್ಯಾತ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದು, ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

      ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ.

     ಈ ಬಗ್ಗೆ ಮಾತನಾಡಿದ ಅವರು, 2021ರ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ, ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap