ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ!!!

ಬೆಂಗಳೂರು:

       ಭಟ್ಕಳ ಕ್ಷೇತ್ರದ ಮಾಜಿ ಶಾಸಕ, ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕರಾದ ಜೆ.ಡಿ.ನಾಯ್ಕ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.

      ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಅವರು ಜೆ.ಡಿ.ನಾಯ್ಕ್ ಅವರಿಗೆ ಪಕ್ಷದ  ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

      ಬಳಿಕ ಮಾತನಾಡಿದ ಜೆ.ಡಿ.ನಾಯ್ಕ್,  ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಆದ್ದರಿಂದಲೇ ನನ್ನನ್ನು ಕಾಂಗ್ರೆಸ್‍ಗೆ ಮರಳಿ ಕರೆತರಲಾಗಿದೆ ಎನ್ನುವುದು ಸುಳ್ಳು ವದಂತಿ. ಸದ್ಯಕ್ಕೆ ನಾನು ಲೋಕಸಭೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.

      ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ‘ಕೆಲವು ಕಾರಣಗಳಿಂದಾಗಿ ಜೆ.ಡಿ.ನಾಯ್ಕ್ ಅವರು ಬಿಜೆಪಿ ಸೇರಿದ್ದರು. ಈಗ ಅವರು ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್ ಆಗಿದ್ದಾರೆ’ ಎಂದರು.

      ಭಟ್ಕಳ-ಹೊನ್ನಾವರ ಕ್ಷೇತ್ರದಿಂದ 2008ರ ಚುನಾವಣೆಯಲ್ಲಿ 49079 ಮತಗಳನ್ನು ಪಡೆದು ಜೆ.ಡಿ.ನಾಯ್ಕ್ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ 21766 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ನಂತರ 2017ರಲ್ಲಿ ಅವರು ಬಿಜೆಪಿ ಸೇರಿದ್ದರು.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap