ಭೀಕರ ಅಪಘಾತ : ನಾಲ್ವರು ಸ್ನೇಹಿತರ ದುರ್ಮರಣ!!

ಮೈಸೂರು:

      ಲಾರಿ- ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.

     ಎಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ(25), ಕಂಚಮಳ್ಳಿ ನಿವಾಸಿ ಮಧುಕುಮಾರ್(19), ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು, ಒಡಿಶಾ ಮೂಲದ ಅಹಮ್ಮದ್‌ ಖಾನ್ ಮೃತರು.

     ಸ್ನೇಹಿತನ ಮನೆಗೆ ಹಬ್ಬದೂಟಕ್ಕೆ ತೆರಳಿದ್ದ ಸಹೋದ್ಯೋಗಿಗಳು, ತಡರಾತ್ರಿ ಇಂಡವಾಳು ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಬೈಕ್‌ಗಳು ಡಿಕ್ಕಿ ಹೊಡೆದಿವೆ. ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

      ಮೃತರೆಲ್ಲರೂ ಮೈಸೂರಿನ ಹೋಟೆಲ್‌ವೊಂದರ ಸಿಬ್ಬಂದಿ ಎನ್ನಲಾಗಿದ್ದು, ತಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹಗಳನ್ನಿಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap