ವಿಷಪೂರಿತ ಊಟ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು!!

ಚಿತ್ರದುರ್ಗ: 

      ವಿಷಪೂರಿತ ಆಹಾರ ಸೇವನೆ ಮಾಡಿದ ಹಿನ್ನೆಲೆಯಲ್ಲಿ ಮೂವರು ಅಸ್ವಸ್ಥಗೊಂಡಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

      ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿತ್ತಪ್ಪ(80), ಶಶಿಧರ್ (40), ಹೇಮಾಲತಾ(30) ಮತ್ತು ಭಾಗ್ಯಮ್ಮ (35) ಮೃತ ದುರ್ದೈವಿಗಳು.

      ಮೃತರು ಒಂದೇ ಕುಟುಂಬದ ಅಪ್ಪ ಹಾಗೂ ಮೂವರು ಮಕ್ಕಳು. ಇನ್ನುಳಿದ ಸದಾನಂದ (13), ಮುದ್ದುರಾಜ್ (14), ಅಜಯ್ (14) ಅವರನ್ನು ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮೂವರ ಸ್ಥಿತಿಯೂ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನೆಯ ಹಿನ್ನೆಲೆ:

     ಗುರುವಾರ ರಾತ್ರಿ ಮನೆಯಲ್ಲಿದ್ದ7 ಜನರು ಮುದ್ದೆ ಮತ್ತು ಅವರೆಕಾಳು ಸಾರು ಊಟ ಮಾಡಿದ್ದರು. ಕೆಲವು ಹೊತ್ತಿನ ಬಳಿಕ ಎಲ್ಲರೂ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಮೃತಪಟ್ಟಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

     ಚಿತ್ರದುರ್ಗದ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap