‘ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ’ – ಪರಂ

ಬೆಂಗಳೂರು

 

      ರಾಷ್ಟ್ರದಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಉಪ ಮುಖ್ಯಮಂತ್ರಿ ಡಾ||ಜಿ. ಪರಮೇಶ್ವರ ವಿಷಾದ ವ್ಯಕ್ತಪಡಿಸಿದ್ದಾರೆ.

      ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ದಿ ರಾಜೀವ್ ಗಾಂಧಿಯವರ 38ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಎಂದು ತಿಳಿಸಿದರು.

      ಕಾಂಗ್ರೆಸ್ ಪಕ್ಷ ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ತಾಯಿ ಸಮಾನ. ನಮ್ಮ ಮನೆಯಲ್ಲಿ ಹೇಗೆ ತಾಯಿ ನೋಡಿಕೊಳ್ಳುತ್ತೇವೆ ಹಾಗೆ ಪಕ್ಷವನ್ನು ನೊಡಿಕೊಳ್ಳಬೇಕು. ಪಕ್ಷದ ಶಿಸ್ತನ್ನು ಪಾಲಿಸದ ನಾಯಕರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಅಧ್ಯಕ್ಷರಿಗೆ ಪರಮೇಶ್ವರ್ ಮನವಿ ಮಾಡಿದರು.

      ಪುಣ್ಯ ಸ್ಮರಣೆ ಕಾರ್ಯ ಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಕೆ ಪಾಟೀಲ್ ರಾಜೀವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸ್ಮರಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap