ಮೈಸೂರು:
ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದಾರೆ.
ಮೈಸೂರಿನಲ್ಲಿ ಇಂದು ಮಾತನಾಡುತ್ತಿದ್ದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಇರುವುದಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೊಂದಿಗೆ ಬಿಎಸ್ಪಿ ಪಕ್ಷವು ಜತೆಗೂಡುವುದಿಲ್ಲ. ನನ್ನನ್ನು ಯಾವುದೇ ಬಿಜೆಪಿ ನಾಯಕರು ಸಂಪರ್ಕ ಮಾಡಿಲ್ಲ. ಸ್ಥಳೀಯ ಬಿಜೆಪಿ ನಾಯಕರು ಕೂಡ ನನ್ನ ಜೊತೆ ಇದ್ದಾರೆ. ಆದರೆ ಯಾರು ಕೂಡ ಪಕ್ಷದ ಬಗ್ಗೆ ಮಾತನಾಡಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ