ಮಂಗಳೂರು : ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದು ಅನಿಲ ಸೋರಿಕೆ!!

ಮಂಗಳೂರು:

      ಅನಿಲ ಸಾಗಾಟದ ಬುಲೆಟ್ ಟ್ಯಾಂಕರೊಂದು ಪಲ್ಟಿ ಹೊಡೆದು ಅನಿಲ ಸೋರಿಕೆ ಉಂಟಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ನಡೆದಿದೆ.

      ಇಂದು ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ಅನಿಲ ಸೋರಿಕೆ ಉಂಟಾಗಿದ್ದು, ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.

     ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ. ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು.

     ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap