ಬೆಳಗಾವಿ :
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ನಾಗರ ಮುನ್ನೋಳಿಯಲ್ಲಿ ಹಳ್ಳ ದಾಟಲು ಹೋದ ಹತ್ತು ವರ್ಷದ ಬಾಲಕಿ ನೀರು ಪಾಲಾದ ಘಟನೆ ನಡೆದಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಿಲ್ಪಾ ಸಿದ್ದಪ್ಪ ಮನಗೂಳಿ (10) ಕೊಚ್ಚಿ ಹೋದ ಬಾಲಕಿ. ಈಕೆ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾಳೆ. ಹಳ್ಳದಿಂದ ಸ್ವಲ್ಪ ದೂರದಲ್ಲೇ ಬಾಲಕಿ ಶವ ಪತ್ತೆಯಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೆರೆಯಿಂದ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಸಿಎಂ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/a-view-of-the-flooded-belag.gif)