ರೈತರ ಖಾತೆಗೆ ನೇರವಾಗಿ ರಸಗೊಬ್ಬರ ಸಬ್ಸಿಡಿ!?

ನವದೆಹಲಿ:

      ಇನ್ಮುಂದೆ ರಸಗೊಬ್ಬರ ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗಳಿಗೇ ನೇರವಾಗಿ ವರ್ಗಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

      ಹೌದು ಹೇರಳವಾಗಿ ಬಳಕೆ ಆಗುತ್ತಿರುವ ರಾಸಾಯನಿಕ ರಸಗೊಬ್ಬರಕ್ಕೆ ಕಡಿವಾಣ ಹಾಕಲು ತೀರ್ಮಾನಿಸಿರುವ ಕೇಂದ್ರ ಸರ್ಕಾರ, ಎಲ್ಪಿಜಿ ಸಬ್ಸಿಡಿ ಮಾದರಿಯಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

     ಇದರಿಂದ ರಸಗೊಬ್ಬರ ಪ್ರಮಾಣ ನಿಯಂತ್ರಣಕ್ಕೆ ಬರಲಿದ್ದು, ಅಲ್ಲದೇ ನಿಗದಿಗಿಂತ ಹೆಚ್ಚು ರಸಗೊಬ್ಬರ ಬಳಸಿದರೆ ಸಬ್ಸಿಡಿ ಸಿಗುವುದಿಲ್ಲ ಎನ್ನಲಾಗಿದೆ.

      ನೀತಿ ಆಯೋಗ ಈ ಕುರಿತ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದ್ದು, ರೈತರ ಬ್ಯಾಂಕ್ ಖಾತೆಗಳಿಗೆ ರಸಗೊಬ್ಬರ ಸಬ್ಸಿಡಿ ವರ್ಗಾವಣೆ ಮಾಡಲಾಗುವುದು ಅಥವಾ ಎಕರೆಗೆ ಇಷ್ಟು ಸಬ್ಸಿಡಿ ಮೊತ್ತವನ್ನು ನಿಗದಿಪಡಿಸಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ನೀಡುವ ಚಿಂತನೆ ಇದೆ. ಮಾಹಿತಿಯ ಪ್ರಕಾರ ರಸಗೊಬ್ಬರ ಸಬ್ಸಿಡಿ ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link