ನಿಧಿಯ ಆಸೆಗೆ ಅಜ್ಜಿಯನ್ನೇ ಬಲಿಪಡೆದ ಮೊಮ್ಮಗ!!!

ಶಿರಸಿ :

     ಮೊಮ್ಮಗನೊಬ್ಬ ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ನೀಡುವ ನೆಪದಲ್ಲಿ ಕೊಲೆ ಮಾಡಿದ ಘಟನೆ ಶಿರಸಿಯ ಬದನಗೋಡ ಗ್ರಾಮದಲ್ಲಿ ನಡೆದಿದೆ. 

      ಬದನಗೋಡಿನ ಪುಟ್ಟವ್ವ ಗೊಲ್ಲರ್‌ (75) ಮೃತ ದುರ್ದೈವಿ. ರಮೇಶ್ ಗೊಲ್ಲರ್ (32) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

      ಈತನಿಗೆ ಕನಸಿನಲ್ಲಿ ಈತನು ಪೂಜಿಸುವ ಇದೇ ಊರಿನ ಹುಲಿಯಮ್ಮ ದೇವರು ಬಂದು ನಿನಗೆ ನಿಧಿ ಸಿಗುತ್ತದೆ ಅದಕ್ಕಾಗಿ ನೀನು ಐದು ನರಬಲಿ ಕೊಡಬೇಕು ಎಂಬುದಾಗಿ ಹೇಳಿತ್ತಂತೆ.

      ಅದಕ್ಕಾಗಿ ಈತ ಈ ಹಿಂದೆ ಮಳಗಿ ಡ್ಯಾಮ್ ಬಳಿ ಬಾಲಕನೋರ್ವವನನ್ನು ಕೊಲೆ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಆದರೆ ಇದೀಗ ಜಾಮೀನಿನ ಮೂಲಕ ಹೊರ ಬಂದಿದ್ದ ರಮೇಶ್ ಗೊಲ್ಲರ್ ನಿಧಿಯ ಆಸೆಗೆ ಎರಡನೇ ಬಲಿಯಾಗಿ ತನ್ನ ಅಜ್ಜಿಯ ಕುತ್ತಿಗೆ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

      ತಾನು ಇನ್ನು ಮೂರು ಬಲಿ ಪಡೆದರೆ ನಿಧಿ ಪಡೆಯುವ ಹಂಬಲವನ್ನು ಪೊಲೀಸರ ಬಳಿ ಹೇಳಿದ್ದಾನೆ. ಇದರಿಂದ ಮತ್ತಷ್ಟು ಬಲಿಯಾಗುವ ಆತಂಕದಲ್ಲಿ ಗ್ರಾಮದವರು ಊರಿನಲ್ಲಿ ಓಡಾಡಲೂ ಭಯ ಪಡುತ್ತಿದ್ದಾರೆ ಎನ್ನಲಾಗಿದೆ.

     ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap