ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಐಟಿ ಅಧಿಕಾರಿಗಳು – ಸಿಎಂ ಟ್ವೀಟ್!!

ಬೆಂಗಳೂರು: 

      ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು ಇದನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

      ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಮೈಸೂರಿನಲ್ಲಿ ತಂಗಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ನಸುಕಿನ 4 ಗಂಟೆವರೆಗೆ ದಾಳಿ ಮಾಡಿ ಅವುಗಳಲ್ಲಿ ಸ್ಪೈ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

      ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

     ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎರಡು ದಿನಗಳಿಂದ ರಾಜ್ಯದಲ್ಲಿ ಐಟಿ ದಾಳಿ ನಡೆಯುತ್ತಿದೆ. ದೋಸ್ತಿ ಪಕ್ಷಗಳ ಕಾರ್ಯಕರ್ತರನ್ನು ಬೆದರಿಸಲು ಕೇಂದ್ರಸರ್ಕಾರವು ಐಟಿ ಅಧಿಕಾರಿಗಳನ್ನು ಬಳಸಿಕೊಂಡು ಈ ತಂತ್ರ ಮಾಡುತ್ತಿದೆ ಎಂದು ಕೂಡ ಅವರು ಆರೋಪಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap