ಶಾಸಕರ ಅನರ್ಹತೆ : ಸುಪ್ರೀಂ ಮೆಟ್ಟಿಲೇರುತ್ತೇವೆ -ವಿಶ್ವನಾಥ್

ಬೆಂಗಳೂರು:

     ಶಾಸಕರ ಅನರ್ಹತೆ ಕುರಿತು ಸುಪ್ರಿಂಕೋರ್ಟಿನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಅತೃಪ್ತ ಶಾಸಕರ ಪರವಾಗಿ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.

     ಸ್ಪೀಕರ್ ಮೂವರನ್ನ ಅನರ್ಹಗೊಳಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ ಎಚ್.ವಿಶ್ವನಾಥ್ ಅವರು, ಇನ್ನು 2-3 ದಿನಗಳಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತೇವೆ. ಅನರ್ಹತೆ ವಿಚಾರವನ್ನ ಸುಪ್ರಿಂಕೋರ್ಟಿನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಿಡಿಕಾರಿದ ಅವರು ‘ನಾವು ವಾಪಸ್ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ವಿಶ್ವನಾಥ್‌ ತಿಳಿಸಿದ್ದಾರೆ.

      ಗುರುವಾರದಂದು ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಈ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. 

      ಸರ್ಕಾರ ರಚನೆ ಉಮೇದಿನಲ್ಲಿರುವ ಬಿಜೆಪಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಸಂಜೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕೋರಿದರು. ರಾಜ್ಯಪಾಲರು ಸಂಜೆ 6ಕ್ಕೆ ಪ್ರಮಾಣ ಸ್ವೀಕರಿಸಲು ಅವಕಾಶ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap